Public Prime News

CLEAR VISION, TRUE MISSION

ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!
kannadanadi

ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

Public Prime News

Public Prime News

Reported by Public Prime News

ಬೆಂಗಳೂರು:
ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು (Sales Tax) ಕಡಿತಗೊಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಇಂಧನ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ನೀತಿಗಳೇ ಕಾರಣ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

  • ತೆರಿಗೆ ಕಡಿತಕ್ಕೆ ನಿರಾಕರಣೆ: 

  • ರಾಜ್ಯದ ಅಭಿವೃದ್ಧಿ ಕಾರ್ಯಗಳು ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಪನ್ಮೂಲ ಕ್ರೋಡೀಕರಣ ಅಗತ್ಯವಿರುವುದರಿಂದ ಸದ್ಯಕ್ಕೆ ತೈಲ ತೆರಿಗೆ ಕಡಿತಗೊಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ.


  • ಕೇಂದ್ರದ ವಿರುದ್ಧ ಆಕ್ರೋಶ: 

  • ಕೇಂದ್ರ ಸರ್ಕಾರವು ಮೂಲ ಅಬಕಾರಿ ಸುಂಕವನ್ನು ಕಡಿಮೆ ಮಾಡಿ, ಸೆಸ್ ಮತ್ತು ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಇದರಿಂದ ಬರುವ ಹಣ ನೇರವಾಗಿ ಕೇಂದ್ರದ ಖಜಾನೆ ಸೇರುತ್ತದೆಯೇ ವಿನಃ ನಿಯಮಗಳ ಪ್ರಕಾರ ರಾಜ್ಯಗಳಿಗೆ ಅದರಲ್ಲಿ ಯಾವುದೇ ಪಾಲು ಸಿಗುತ್ತಿಲ್ಲ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.


  • ನೆರೆ ರಾಜ್ಯಗಳ ಹೋಲಿಕೆ: 

  • ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತಮಿಳುನಾಡಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಇಂದಿಗೂ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಿವೆ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.


ರಾಜ್ಯ ಸರ್ಕಾರದ ಈ ನಿಲುವಿನಿಂದಾಗಿ ಸದ್ಯಕ್ಕಂತೂ ಕರ್ನಾಟಕದ ವಾಹನ ಸವಾರರಿಗೆ ಇಂಧನ ದರ ಇಳಿಕೆಯ ಯಾವುದೇ ಬಗೆಯ ಆಶಾವಾದ ಕಾಣಿಸುತ್ತಿಲ್ಲ


Share this story