Public Prime News

CLEAR VISION, TRUE MISSION

ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಬಂಪರ್ ಕೊಡುಗೆ; ಕೇಂದ್ರದಿಂದ ರೂ. 18 ಕೋಟಿ ಅನುದಾನ ಬಿಡುಗಡೆ
kannadanadi

ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಬಂಪರ್ ಕೊಡುಗೆ; ಕೇಂದ್ರದಿಂದ ರೂ. 18 ಕೋಟಿ ಅನುದಾನ ಬಿಡುಗಡೆ

Public Prime News

Public Prime News

Reported by Public Prime News

ಕಾರ್ಕಳ:

ಕರಾವಳಿ ಮತ್ತು ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗಗಳನ್ನು ಸಂಪರ್ಕಿಸುವ ಪ್ರಮುಖ ಜೀವನಾಡಿಯಾಗಿರುವ ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 18 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಸುನೀಲ್ ಕುಮಾರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.


ರಸ್ತೆ ಅಭಿವೃದ್ಧಿಯ ವಿಶೇಷತೆಗಳೇನು.?

ಫೇಸ್‌ಬುಕ್‌ನಲ್ಲಿ ಈ ಕುರಿತು ವಿವರ ಹಂಚಿಕೊಂಡಿರುವ ಅವರು, ರಾಷ್ಟ್ರೀಯ ಹೆದ್ದಾರಿ ವತಿಯಿಂದ ಬಿಡುಗಡೆಯಾಗಿರುವ ಈ ಅನುದಾನದ ಮೂಲಕ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆಗಳನ್ನು ನಿರ್ಮಿಸಲಾಗುವುದು. ಜೊತೆಗೆ, ಆಗುಂಬೆಯಿಂದ ಹೆಬ್ರಿ ಪೇಟೆ ತನಕದ ರಸ್ತೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗುತ್ತದೆ.


ಸುಗಮ ಸಂಚಾರಕ್ಕಾಗಿ ನಿರಂತರ ಪ್ರಯತ್ನ

ಆಗುಂಬೆ ಘಾಟ್ ರಸ್ತೆಯು ಕಡಿದಾದ ತಿರುವುಗಳನ್ನು ಹೊಂದಿದ್ದು, ಇಲ್ಲಿ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರದ ಹಿತದೃಷ್ಟಿಯಿಂದ ಈ ಹಿಂದೆ ಸಂಸದರ ಮುಖಾಂತರ ಕೇಂದ್ರ ಸರ್ಕಾರಕ್ಕೆ ವಿಶೇಷ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರವು ಈಗ 18 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಈ ಭಾಗದ ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿದೆ.

 

ಪ್ರಮುಖ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕರು

ಅನುದಾನ ಬಿಡುಗಡೆಗೆ ಕಾರಣರಾದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಈ ಅನುದಾನ ತರುವಲ್ಲಿ ವಿಶೇಷ ಮುತುವರ್ಜಿ ವಹಿಸಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶಾಸಕ ಸುನೀಲ್ ಕುಮಾರ್ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದಾಗಿ ಮುಂದಿನ ದಿನಗಳಲ್ಲಿ ಪ್ರಯಾಣಿಕರಿಗೆ ಮತ್ತಷ್ಟು ಸುಲಭ ಹಾಗೂ ಸುರಕ್ಷಿತ ಸಂಚಾರದ ಅನುಭವ ಸಿಗಲಿದೆ.

Share this story