ದೇಶಾದ್ಯಂತ ಮಹಾ ಜನಸಂಪರ್ಕ ಅಭಿಯಾನ
ಮೋದಿ ಸರ್ಕಾರದ 12ನೇ ವರ್ಷದ ವಾರ್ಷಿಕೋತ್ಸವವನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, ದೇಶದ ಮೂಲೆ ಮೂಲೆಗೂ ತಲುಪಿಸಲು ಬಿಜೆಪಿ ಹಿರಿಯ ನಾಯಕರು ಮತ್ತು ಕಾರ್ಯಕರ್ತರ ದಂಡನ್ನೇ ಸಜ್ಜುಗೊಳಿಸುತ್ತಿದೆ.
ಸಾಧನೆಗಳ ಪ್ರಚಾರ:
ಕಳೆದ 12 ವರ್ಷಗಳಲ್ಲಿ ಜಾರಿಗೆ ತಂದಿರುವ ಜನ ಕಲ್ಯಾಣ ಯೋಜನೆಗಳು, ಮೂಲಸೌಕರ್ಯ ಅಭಿವೃದ್ಧಿ, ಮತ್ತು ಆರ್ಥಿಕ ಸುಧಾರಣೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲು ವಿಶೇಷ ರಾರಯಲಿಗಳು, ಸಾರ್ವಜನಿಕ ಸಭೆಗಳು ಹಾಗೂ ಗೋಷ್ಠಿಗಳನ್ನು ಆಯೋಜಿಸಲಾಗುತ್ತದೆ.
ವಿವಿಧ ಮೋರ್ಚಾಗಳ ಸಕ್ರಿಯ ಭಾಗಿತ್ವ:
ಯುವ ಮೋರ್ಚಾ, ಮಹಿಳಾ ಮೋರ್ಚಾ ಮತ್ತು ಒಬಿಸಿ ಮೋರ್ಚಾಗಳ ಮೂಲಕ ಸಮಾಜದ ಪ್ರತಿಯೊಂದು ವರ್ಗದ ಫಲಾನುಭವಿಗಳನ್ನು ನೇರವಾಗಿ ಸಂಪರ್ಕಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ರೂಪಿಸಲಾಗಿದೆ.
12 ವರ್ಷಗಳ ಆಡಳಿತದ ಪ್ರಮುಖ ಮೈಲಿಗಲ್ಲುಗಳು
ಮೋದಿ ಸರ್ಕಾರದ ಈ ಸುದೀರ್ಘ ಪಯಣದಲ್ಲಿ ಭಾರತವು ಜಾಗತಿಕವಾಗಿ ಮತ್ತು ಆಂತರಿಕವಾಗಿ ಹಲವು ಐತಿಹಾಸಿಕ ಬದಲಾವಣೆಗಳಿಗೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಹೈಲೈಟ್ ಮಾಡಲಿದೆ:
ಕಲ್ಯಾಣ ಯೋಜನೆಗಳ ಕ್ರಾಂತಿ: ಪ್ರಧಾನಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆ, ಆಯುಷ್ಮಾನ್ ಭಾರತ್ ಮತ್ತು ಜನ್ ಧನ್ ಖಾತೆಗಳ ಮೂಲಕ ಕೋಟ್ಯಂತರ ಬಡ ಕುಟುಂಬಗಳ ಜೀವನಮಟ್ಟ ಸುಧಾರಣೆ ಜಾರಿಗೆ ತಂದಿರುವುದು.
ಐತಿಹಾಸಿಕ ನಿರ್ಧಾರಗಳು: ಆರ್ಟಿಕಲ್ 370 ರದ್ದತಿ, ಭವ್ಯ ರಾಮಮಂದಿರ ನಿರ್ಮಾಣ, ಮತ್ತು ಡಿಜಿಟಲ್ ಇಂಡಿಯಾ ಕ್ರಾಂತಿಯ ಮೂಲಕ ದೇಶದ ಭದ್ರತೆ ಹಾಗೂ ಆರ್ಥಿಕತೆಯನ್ನು ಬಲಪಡಿಸಿರುವುದು.
ಜಾಗತಿಕ ಮನ್ನಣೆ:
ಜಾಗತಿಕ ವೇದಿಕೆಯಲ್ಲಿ ಭಾರತದ ಪ್ರಭಾವ ಹೆಚ್ಚಿರುವುದು ಮತ್ತು ವಿಶ್ವದ ಪ್ರಮುಖ ಆರ್ಥಿಕ ಶಕ್ತಿಯಾಗಿ ದೇಶ ಹೊರಹೊಮ್ಮಿರುವುದು.]
ವಿರೋಧ ಪಕ್ಷಗಳಿಗೆ ಕೌಂಟರ್ ಇಡುವ ತಂತ್ರ:
ಮೋದಿ ಸರ್ಕಾರದ 12 ವರ್ಷಗಳ ಸುಭದ್ರ ಆಡಳಿತವನ್ನು ಮುನ್ನೆಲೆಗೆ ತರುವ ಮೂಲಕ, ವಿರೋಧ ಪಕ್ಷಗಳ ಟೀಕೆಗಳಿಗೆ ತಕ್ಕ ಉತ್ತರ ನೀಡಲು ಮತ್ತು ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಈ ಸಂಭ್ರಮಾಚರಣೆಯ ವೇದಿಕೆಯನ್ನು ಬಳಸಿಕೊಳ್ಳಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ.
ಕೇಂದ್ರ ಸರ್ಕಾರದ ಈ ಸಾಧನೆಗಳ ರಿಪೋರ್ಟ್ ಕಾರ್ಡ್ ಅನ್ನು ಹೊತ್ತು ಬಿಜೆಪಿ ನಾಯಕರು ಶೀಘ್ರದಲ್ಲೇ ಜನರ ಮನೆ ಬಾಗಿಲಿಗೆ ತೆರಳಲಿದ್ದಾರೆ.


