Public Prime News

CLEAR VISION, TRUE MISSION

ಬಿಗ್ ಬ್ರೇಕಿಂಗ್: ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಾಗಿ ಘೋಷಣೆ.
politics

ಬಿಗ್ ಬ್ರೇಕಿಂಗ್: ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಾಗಿ ಘೋಷಣೆ.

Public Prime News

Public Prime News

Reported by Public Prime News

ಬೆಂಗಳೂರು: 

ಕರ್ನಾಟಕ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 28) ಮಧ್ಯಾಹ್ನ 3 ಗಂಟೆಗೆ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.


  • ಭಾವನಾತ್ಮಕ ವಿದಾಯ: 

  • ಇಂದು ಬೆಳಿಗ್ಗೆ ನಡೆದ ಸಚಿವರ 'ಬ್ರೇಕ್‌ಫಾಸ್ಟ್ ಮೀಟಿಂಗ್'ನಲ್ಲಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ಈ ವೇಳೆ ಡಿಕೆಶಿ ಅವರು ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.


  • ಪರಮೇಶ್ವರ್ ಹೇಳಿಕೆ: 

  • ಕಳೆದ 3 ವರ್ಷಗಳಿಂದ ಸಹಕರಿಸಿದ ಸಚಿವರಿಗೆ ಧನ್ಯವಾದ ತಿಳಿಸಲು ಸಿಎಂ ಈ ಸಭೆ ಕರೆದಿದ್ದರು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಖಚಿತಪಡಿಸಿದ್ದಾರೆ.


  • ಮುಂದಿನ ಸಿಎಂ ಯಾರು.?

  • ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದ್ದು, ಈಗಾಗಲೇ ಅವರ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.


  • ಹೈಕಮಾಂಡ್ ಆಫರ್: 

  • ಸಿದ್ದರಾಮಯ್ಯ ಅವರಿಗೆ ದೆಹಲಿ ಮಟ್ಟದಲ್ಲಿ ದೊಡ್ಡ ರಾಷ್ಟ್ರೀಯ ಜವಾಬ್ದಾರಿ ಹಾಗೂ ರಾಜ್ಯಸಭಾ ಸೀಟು ಸಿಗುವ ಸಾಧ್ಯತೆ ಇದೆ.


ಮಧ್ಯಾಹ್ನ 3 ಗಂಟೆಗೆ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ, ಬಳಿಕ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ.

Share this story