Public Prime News

CLEAR VISION, TRUE MISSION

ಪುತ್ತೂರು: ಕಾವೇರಿಕಟ್ಟೆ ಬಳಿ  ಅಪಘಾತ; ಎಟಿಎಂ ಹಣ ಸಾಗಣೆ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
local-news

ಪುತ್ತೂರು: ಕಾವೇರಿಕಟ್ಟೆ ಬಳಿ ಅಪಘಾತ; ಎಟಿಎಂ ಹಣ ಸಾಗಣೆ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

Public Prime News

Public Prime News

Reported by Public Prime News

ಪುತ್ತೂರು: 

ನಗರದ ಕಾವೇರಿಕಟ್ಟೆ ಸಮೀಪ ಮಂಗಳವಾರ ಬೈಕ್ ಹಾಗೂ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.


ಅಪಘಾತದ ತೀವ್ರತೆಗೆ ಬೈಕ್ ಹಾಗೂ ಹಣ ಸಾಗಣೆ ವಾಹನ ಎರಡಕ್ಕೂ ತೀವ್ರ ಹಾನಿಯಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಯಾವುದೇ ಪ್ರಾಣಾಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದು, ದೊಡ್ಡಮಟ್ಟದ ಅನಾಹುತ ತಪ್ಪಿದೆ.


ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಸಹಾಯ ಮಾಡಿದರು. ಅಪಘಾತಕ್ಕೆ ನಿಖರವಾದ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.


ಸ್ಥಳಕ್ಕೆ ಭೇಟಿ ನೀಡಿರುವ ಸಂಬಂಧಿತ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this story